ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.
ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm