ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.
ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm