ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.

ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm