ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm