ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm