ಬ್ರೇಕಿಂಗ್ ನ್ಯೂಸ್
07-02-22 11:02 pm Mangalore Correspondent ಕ್ರೈಂ
ಮಂಗಳೂರು, ಫೆ.7 : ಮನೆ ಬಳಿಯಲ್ಲೇ ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಪಡೆದು ಅದನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ತುಂಬಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ.
ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ಮನೆಗೆ ತಾಗಿಕೊಂಡು ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಅದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಗಳನ್ನು ತುಂಬಿಸಿಡಲಾಗಿತ್ತು. ಕಮರ್ಶಿಯಲ್ ಬಳಕೆಯ ವಿವಿಧ ಗಾತ್ರದ ಸಿಲಿಂಡರ್ ಗಳಿಗೆ ತಾನೇ ರೆಗ್ಯುಲೇಟರ್ ಬಳಸಿ ಗೃಹ ಬಳಕೆಯ ಸಿಲಿಂಡರ್ ಗಳಿಂದ ಗ್ಯಾಸ್ ತುಂಬಿಸುತ್ತಿದ್ದುದನ್ನು ಪತ್ತೆ ಮಾಡಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ರಂಜಿತ್ ಮತ್ತವರ ತಂಡ ಹಾಗೂ ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹ್ಯಾರಿಸ್, ಪ್ರಭಾರ ಆಹಾರ ನಿರೀಕ್ಷಕಿ ರೇಖಾ ಮತ್ತು ಸಿಬಂದಿ ಫೆ.5ರಂದು ಸ್ಥಳಕ್ಕೆ ದಾಳಿ ನಡೆಸಿದ್ದರು. ಈ ವೇಳೆ, ಆರೋಪಿ ಫ್ರಾನ್ಸಿಸ್ ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರನ್ನು ನೆಲದಲ್ಲಿಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರನ್ನು ಕವುಚಿ ಹಾಕಿ ಗ್ಯಾಸ್ ತುಂಬಿಸುತ್ತಿದ್ದ. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳದಲ್ಲಿ ಎಚ್ ಪಿ, ಇಂಡೇನ್, ಭಾರತ್, ಪ್ಯೂರ್, ಟೋಟಲ್ ಕಂಪನಿಯ ದೊಡ್ಡ ಮತ್ತು ಸಣ್ಣ ಗಾತ್ರದ ವಿವಿಧ ಮಾದರಿಯ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ತುಂಬಿದ ಸಿಲಿಂಡರ್ -15, ತುಂಬಿದ ಆಕ್ಸಿಜನ್ ದೊಡ್ಡ ಸಿಲಿಂಡರ್ – 1, ಖಾಲಿ ಗ್ಯಾಸ್ ಸಿಲಿಂಡರ್ – 112 ಹೀಗೆ ಒಟ್ಟು 128 ಸಿಲಿಂಡರ್ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 1.92 ಲಕ್ಷ ರೂಪಾಯಿ ಆಗಿದೆ. ಸ್ಥಳದಲ್ಲಿ ದೊರೆತ ವಿವಿಧ ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal police raided the house of one Francis at Chembugudde of Permannur in the taluk on definite information that the accused is transferring liquefied petroleum gas (LPG) from domestic gas cylinders to commercial ones though artificial regulators without any safety. The accused absconded from the spot.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm