ಬ್ರೇಕಿಂಗ್ ನ್ಯೂಸ್
07-02-22 11:02 pm Mangalore Correspondent ಕ್ರೈಂ
ಮಂಗಳೂರು, ಫೆ.7 : ಮನೆ ಬಳಿಯಲ್ಲೇ ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಪಡೆದು ಅದನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ತುಂಬಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ.
ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ಮನೆಗೆ ತಾಗಿಕೊಂಡು ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಅದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಗಳನ್ನು ತುಂಬಿಸಿಡಲಾಗಿತ್ತು. ಕಮರ್ಶಿಯಲ್ ಬಳಕೆಯ ವಿವಿಧ ಗಾತ್ರದ ಸಿಲಿಂಡರ್ ಗಳಿಗೆ ತಾನೇ ರೆಗ್ಯುಲೇಟರ್ ಬಳಸಿ ಗೃಹ ಬಳಕೆಯ ಸಿಲಿಂಡರ್ ಗಳಿಂದ ಗ್ಯಾಸ್ ತುಂಬಿಸುತ್ತಿದ್ದುದನ್ನು ಪತ್ತೆ ಮಾಡಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ರಂಜಿತ್ ಮತ್ತವರ ತಂಡ ಹಾಗೂ ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹ್ಯಾರಿಸ್, ಪ್ರಭಾರ ಆಹಾರ ನಿರೀಕ್ಷಕಿ ರೇಖಾ ಮತ್ತು ಸಿಬಂದಿ ಫೆ.5ರಂದು ಸ್ಥಳಕ್ಕೆ ದಾಳಿ ನಡೆಸಿದ್ದರು. ಈ ವೇಳೆ, ಆರೋಪಿ ಫ್ರಾನ್ಸಿಸ್ ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರನ್ನು ನೆಲದಲ್ಲಿಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರನ್ನು ಕವುಚಿ ಹಾಕಿ ಗ್ಯಾಸ್ ತುಂಬಿಸುತ್ತಿದ್ದ. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಎಚ್ ಪಿ, ಇಂಡೇನ್, ಭಾರತ್, ಪ್ಯೂರ್, ಟೋಟಲ್ ಕಂಪನಿಯ ದೊಡ್ಡ ಮತ್ತು ಸಣ್ಣ ಗಾತ್ರದ ವಿವಿಧ ಮಾದರಿಯ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ತುಂಬಿದ ಸಿಲಿಂಡರ್ -15, ತುಂಬಿದ ಆಕ್ಸಿಜನ್ ದೊಡ್ಡ ಸಿಲಿಂಡರ್ – 1, ಖಾಲಿ ಗ್ಯಾಸ್ ಸಿಲಿಂಡರ್ – 112 ಹೀಗೆ ಒಟ್ಟು 128 ಸಿಲಿಂಡರ್ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 1.92 ಲಕ್ಷ ರೂಪಾಯಿ ಆಗಿದೆ. ಸ್ಥಳದಲ್ಲಿ ದೊರೆತ ವಿವಿಧ ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal police raided the house of one Francis at Chembugudde of Permannur in the taluk on definite information that the accused is transferring liquefied petroleum gas (LPG) from domestic gas cylinders to commercial ones though artificial regulators without any safety. The accused absconded from the spot.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm