ಬ್ರೇಕಿಂಗ್ ನ್ಯೂಸ್
10-02-22 03:06 pm HK Desk news ಕ್ರೈಂ
ಬೆಂಗಳೂರು, ಫೆ.10 : ಗಂಡ ಹೃದಯಾಘಾತದಿಂದ ತೀರಿಕೊಂಡಿದ್ದಾನೆಂದು ಸುಳ್ಳು ಹೇಳಿ ಇನ್ ಶೂರೆನ್ಸ್ ಕಂಪನಿಯಿಂದ ಮೂರು ಕೋಟಿ ರೂಪಾಯಿ ವಿಮೆ ಪಡೆದು ವಂಚನೆ ನಡೆಸಿರುವ ಬಗ್ಗೆ ಮಹಿಳೆಯೊಬ್ಬರ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಟ್ಟಸಂದ್ರ ನಿವಾಸಿ ಸುಪ್ರಿಯಾ ಲಾಕಾಕುಲ ಎಂಬ ಮಹಿಳೆಯ ವಿರುದ್ಧ ಇನ್ ಶೂರೆನ್ಸ್ ಕಂಪನಿಯ ಲೀಗಲ್ ಅಡ್ವೈಸರ್ ಪಿ.ಎಸ್.ಗಣಪತಿ ದೂರು ನೀಡಿದ್ದಾರೆ. ಆಂಧ್ರಪ್ರದೇಶ ಮೂಲದ, ಬೆಂಗಳೂರಿನಲ್ಲಿ ನೆಲೆಸಿದ್ದ ಕೃಷ್ಣಪ್ರಸಾದ್ ಗರಳಪಟ್ಟಿ(31) ಎಂಬವರು ಎರಡು ವರ್ಷಗಳ ಹಿಂದೆ ಖಾಸಗಿ ಇನ್ಶೂರೆನ್ಸ್ ಕಂಪನಿಯಿಂದ ಮೂರು ಕೋಟಿ ರೂಪಾಯಿ ಮೊತ್ತದ ಲೈಫ್ ಇನ್ಶೂರೆನ್ಸ್ ವಿಮೆ ಮಾಡಿಸಿದ್ದರು. ಈ ವೇಳೆ, ತನ್ನ ಪತ್ನಿ ಸುಪ್ರಿಯಾಳನ್ನು ನಾಮಿನಿ ಆಗಿ ತೋರಿಸಿದ್ದರು. ವರ್ಷಕ್ಕೆ 50 ಸಾವಿರ ಪ್ರೀಮಿಯಂ ಕಟ್ಟಲು ಬರುತ್ತಿತ್ತು. ಆನ್ಲೈನಲ್ಲೇ ವಿಮೆಯನ್ನು ಮಾಡಿಸಿಕೊಂಡಿದ್ದರು.
ಆದರೆ, 2021ರ ಮೇ 14ರಂದು ಕೃಷ್ಣಪ್ರಸಾದ್ ಮೃತಪಟ್ಟಿದ್ದು, ಪತ್ನಿ ಸುಪ್ರಿಯಾ ಗಂಡ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ಹೇಳಿ ಇನ್ಶೂರೆನ್ಸ್ ಕಂಪನಿಯಿಂದ ಕ್ಲೈಮ್ ಮಾಡಿಕೊಂಡಿದ್ದರು. ವೈದ್ಯಕೀಯ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ ಕಂಪನಿ, 3.2 ಕೋಟಿ ರೂಪಾಯಿ ವಿಮಾ ಹಣವನ್ನು ಸುಪ್ರಿಯಾ ಬ್ಯಾಂಕ್ ಖಾತೆಗೆ ಹಾಕಿತ್ತು. ಆದರೆ ಈ ನಡುವೆ, ರವಿ ಎಂಬ ವ್ಯಕ್ತಿ ಈ ಬಗ್ಗೆ ಇನ್ಶೂರೆನ್ಸ್ ಕಂಪನಿಗೆ ದೂರು ನೀಡಿದ್ದು, ಕೃಷ್ಣಪ್ರಸಾದ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಲ್ಲ. ವಿಮೆ ಪಡೆಯುವಾಗಲೇ ಅವರಿಗೆ ಕ್ಯಾನ್ಸರ್ ಕಾಯಿಲೆ ಇತ್ತು. ಸುಪ್ರಿಯಾ ಅವರು ನಕಲಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಿ ವಿಮಾ ಹಣವನ್ನು ಪಡೆದಿದ್ದಾರೆಂದು ದೂರಿದ್ದರು.
ಇದರಂತೆ, ಪರಿಶೀಲನೆ ನಡೆಸಿದ ವಿಮಾ ಕಂಪನಿ ಅಧಿಕಾರಿಗಳು ದೂರಿನಲ್ಲಿ ನಿಜಾಂಶ ಇರುವುದನ್ನು ಪತ್ತೆಹಚ್ಚಿದ್ದು, ಮಹಿಳೆ ಕಂಪನಿಗೆ ವಂಚನೆ ಎಸಗಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾಳೆ.
A private insurance company has realised with delay that the wife of a policyholder had falsely claimed that her husband died of heart attack with an eye on claiming the insurance amount of three crore rupees. The company has now filed a complaint against her.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm