ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm