ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm