ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm