ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm