ಬ್ರೇಕಿಂಗ್ ನ್ಯೂಸ್
10-02-22 04:05 pm HK Desk news ಕ್ರೈಂ
ಬಂಟ್ವಾಳ, ಫೆ.10 : ವಿದ್ಯುತ್ ಬಿಲ್ ತಪಾಸಣೆ ಹೆಸರಲ್ಲಿ ಮನೆಯಂಗಳಕ್ಕೆ ಬಂದಿದ್ದ ಅದೇ ನೆಪದಲ್ಲಿ ಮನೆ ಒಳಗೆ ಬಂದು ಮಹಿಳೆಯನ್ನು ಥಳಿಸಿ ದರೋಡೆಗೈದ ಘಟನೆ ವಿಟ್ಲ ಪೇಟೆಯ ಅಡ್ಡದ ಬೀದಿಯಲ್ಲಿ ನಡೆದಿದೆ. ಬುಧವಾರ ಸಂಜೆ ವೇಳೆಗೆ ಮನೆಗೆ ಆಗಮಿಸಿದ್ದ ಇಬ್ಬರು ಆಗಂತುಕರು ಬೀಫಾತುಮ್ಮ ಎಂಬ ಮಹಿಳೆಯ ಮೇಲೆ ಹಲ್ಲೆಗೈದು, ಆಕೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ ಬೀಫಾತುಮ್ಮ (50) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಫಾತುಮ್ಮ ಅವರ ಪತಿ ಸುಲೈಮಾನ್, ವಿಟ್ಲದ ಅಡ್ಡದ ಬೀದಿಯ ಸಮೀಪದಲ್ಲೇ ರಸ್ತೆ ಬದಿ ಎಳನೀರು ಮಾರುವ ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಊಟಕ್ಕೆ ಬಂದು ಆನಂತರ ಹಿಂತಿರುಗಿದ್ದರು. ಕೆಲಹೊತ್ತಿನಲ್ಲಿಯೇ ಬೈಕಿನಲ್ಲಿ ಇಬ್ಬರು ಬಂದಿದ್ದು, ಹೆಲ್ಮೆಟ್ ಹಾಕ್ಕೊಂಡಿದ್ದರು.
ಮಹಿಳೆಯ ಬಳಿ ಕರೆಂಟ್ ಬಿಲ್ ಕಟ್ಟಿಲ್ಲವಾ ಎಂದು ವಿಚಾರಿಸಿದ್ದಾರೆ. ಬಿಲ್ ಇದೆಯೆಂದು ಒಳಗೆ ಹೋದ ಮಹಿಳೆಯನ್ನು ಯುವಕರು ಹಿಂಬಾಲಿಸಿ ಒಳಗೆ ಬಂದಿದ್ದು, ಕೈಯಲ್ಲಿದ್ದ ಚೂರಿಯಿಂದ ಕೈ, ಹೊಟ್ಟೆ, ಕುತ್ತಿಗೆಗೆ ಹಲ್ಲೆ ಮಾಡಿದ್ದಾರೆ. ಆನಂತರ ಮಹಿಳೆ ಧರಿಸಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಆನಂತರ ಮನೆಯ ಹೊರಗೆ ಬಂದ ಮಹಿಳೆ ಸ್ಥಳೀಯರಿಗೆ ಹೇಳಿದ್ದಾರೆ. ಮಹಿಳೆಯನ್ನು ವಿಟ್ಲ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ, ಮಂಗಳೂರಿಗೆ ಒಯ್ಯಲಾಗಿದೆ.
ಮನೆಯ ಕೊಠಡಿಯ ಕಪಾಟು ಒಡೆದ ರೀತಿಯಲ್ಲಿ ಕಂಡುಬಂದಿದ್ದು ಹಣ ಅಥವಾ ಇನ್ನಿತರ ವಸ್ತುಗಳು ಕಳವಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಮಂಗಳೂರಿನ ಬೆರಳಚ್ಚು ತಜ್ಞರು ತೆರಳಿ, ತಪಾಸಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Miscreants flee with good and cash in the name of collecting electricity bill at Vitla.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm