ಬ್ರೇಕಿಂಗ್ ನ್ಯೂಸ್
10-02-22 05:56 pm Mangalore Correspondent ಕ್ರೈಂ
ಮಂಗಳೂರು, ಫೆ.10 : ಮಂಗಳೂರಿನ ರೌಡಿಸಂನಲ್ಲಿ ಕುಖ್ಯಾತಿ ಪಡೆದಿರುವ ಪಿಂಕಿ ನವಾಜ್ ಮತ್ತು ಆಕಾಶಭವನ್ ಶರಣ್ ಮೇಲೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಪ್ರಯೋಗ ಮಾಡಿದ್ದು ಇಬ್ಬರನ್ನೂ ಬಂಧಿಸಲು ಆದೇಶ ಮಾಡಿದ್ದಾರೆ.
ಆಕಾಶಭವನ್ ಶರಣ್ ಈಗಾಗ್ಲೇ ದರೋಡೆ ಪ್ರಕರಣ ಒಂದರಲ್ಲಿ ತಿಂಗಳ ಹಿಂದೆ ಬಂಧಿತನಾಗಿ ಸದ್ಯ ಮೈಸೂರು ಜೈಲಿನಲ್ಲಿದ್ದು ಆತನನ್ನು ಬಿಜಾಪುರ ಜೈಲಿನಲ್ಲಿ ಬಂಧಿಸಿಡಲು ಆದೇಶ ಮಾಡಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಪಿಂಕಿ ನವಾಜ್ 15ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಮೈಸೂರು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಆತನನ್ನು ಬುಧವಾರ ಕಾಟಿಪಳ್ಳದ ಮನೆಯಿಂದಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಕಾವೂರು ಠಾಣೆ ವ್ಯಾಪ್ತಿಯ ಆಕಾಶಭವನದ ನಿವಾಸಿಯಾಗಿರುವ ರೋಹಿದಾಸ್ ಅಲಿಯಾಸ್ ಆಕಾಶಭವನ್ ಶರಣ್ (37) ವಿರುದ್ಧ ಕೊಲೆ, ಕೊಲೆಯತ್ನ, ಕೊಲೆಸಂಚು, ಅತ್ಯಾಚಾರ, ಸುಲಿಗೆ, ಅಟ್ರಾಸಿಟಿ ಕೇಸ್ ಸೇರಿದಂತೆ 19 ಪ್ರಕರಣಗಳಿವೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ 15 ಕೇಸು ಇದ್ದು, ಉಡುಪಿ ಜಿಲ್ಲೆಯಲ್ಲಿ ಎರಡು ಮತ್ತು ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ ಎರಡು ಕೇಸ್ ಇದೆ. 19 ಪ್ರಕರಣಗಳ ಪೈಕಿ ಆರು ಪ್ರಕರಣ ಹೊರತುಪಡಿಸಿ ಉಳಿದೆಲ್ಲದರಲ್ಲೂ ಆರೋಪಿ ಶರಣ್ ಖುಲಾಸೆಗೊಂಡಿದ್ದಾನೆ. ಎರಡು ಪ್ರಕರಣ ತನಿಖಾ ಹಂತದಲ್ಲಿದ್ದರೆ, ನಾಲ್ಕು ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
2017ರಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿಂಕಿ ನವಾಜ್(27) ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 15 ಪ್ರಕರಣ ದಾಖಲಾಗಿದೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಆರೋಪಿ ಖುಲಾಸೆಗೊಂಡಿದ್ದರೆ, ಉಳಿದೆಲ್ಲ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇತ್ತೀಚೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣ ಉದ್ಘಾಟನೆ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಯಾರನ್ನಾದರೂ ಕೊಲೆ ನಡೆಸಬೇಕೆಂದು ಸಂಚು ನಡೆಸಿದ್ದ ಪ್ರಕರಣದಲ್ಲಿ ಪಿಂಕಿ ನವಾಜ್ ಸೇರಿ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದರು. ಸದ್ರಿ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿ ಹೊರಬಂದ ಕೂಡಲೇ ಗೂಂಡಾ ಕಾಯ್ದೆ ವಿಧಿಸಲಾಗಿದೆ. ಈತನನ್ನು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲು ಕಮಿಷನರ್ ಆದೇಶ ಮಾಡಿದ್ದಾರೆ.
The Police Commissioner N Shashi Kumar IPS, using the power to invoke the Goonda act, arrested notorious criminal rowdy sheeter Pinki Nawaz and issued a detention order against Akashbhavan Sharan on February 10.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm