ಬ್ರೇಕಿಂಗ್ ನ್ಯೂಸ್
14-02-22 09:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.14 : 100 ಕೋಟಿ ಲೋನ್ ಕೊಡಿಸುವುದಾಗಿ ಹೇಳಿ ಉದ್ಯಮಿಗಳನ್ನು ವಂಚಿಸುತ್ತಿದ್ದ ಅಂತರಾಜ್ಯ ಗ್ಯಾಂಗ್ ಒಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಹಾಗೂ ಮಧ್ಯಪ್ರದೇಶ ಮೂಲದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮುಂಬೈ ಮೂಲದ ಸಂತೋಷ್, (36), ಸಂದೇಶ್ (45) ಸೇರಿ ಐವರ ಬಂಧಿತರು. ನೂರು ಕೋಟಿ ಲೋನ್ ಕೊಡಿಸೋದಾಗಿ ಹೇಳಿ ಉದ್ಯಮಿ ವಿನ್ಸನ್ ಎಂಬವರಿಂದ ಒಂದು ಕೋಟಿ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
ಸೂಟ್ಕೇಸ್ನಲ್ಲಿ ತುಂಬಿಸಿದ ಹಣವನ್ನು ತೋರಿಸಿ ಖದೀಮರು ಗಾಳ ಹಾಕುತ್ತಿದ್ದರು. ಎರಡು ಸಾವಿರ ಮುಖಬೆಲೆಯ ಕೋಟ್ಯಾಂತರ ರೂ. ನಗದು ತೋರಿಸಿ ವಂಚನೆ ಎಸಗಿದ್ದಾರೆ ಎನ್ನಲಾಗಿತ್ತು. ವಿನ್ಸನ್, ಮೈಸೂರಿನ ಗಾರ್ಮೆಂಟ್ ಫ್ಯಾಕ್ಟರಿ ಉದ್ಯಮಿಯಾಗಿದ್ದು ವ್ಯಾಪಾರ ಅಭಿವೃದ್ಧಿ ಮಾಡಲು ಲೋನ್ ಪಡೆಯಲು ತಿರುಗಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಆರೋಪಿಗಳಾದ ಸಂತೋಷ್ ಹಾಗೂ ಸಂದೇಶ್, ನೂರು ಕೋಟಿ ಲೋನ್ ತೆಗೆಸಿಕೊಡುವುದಾಗಿ ಹೇಳಿ ಸ್ನೇಹ ಸಂಪಾದಿಸಿದ್ದರು. ಆನಂತರ, ಹಲವು ಫೈವ್ ಸ್ಟಾರ್ ಹೊಟೇಲ್ ಗಳಲ್ಲಿ ಮೀಟಿಂಗ್ ನಡೆಸಿದ್ದು ಈ ಬಗ್ಗೆ ಚರ್ಚೆ ನಡೆಸಿದ್ದರು.
ಸಾವಿರಾರು ಕೋಟಿ ಹಣ ತಮ್ಮ ಬಳಿ ಇರೋದಾಗಿ ಹೇಳಿದ್ದಲ್ಲದೆ, ನಂಬಿಕೆ ಬರಲು ಸೂಟ್ ಕೇಸ್ ಗಳಲ್ಲಿ ತುಂಬಿದ ಹಣವನ್ನು ತೋರಿಸಿ ಆಮಿಷ ಒಡ್ಡಿದ್ದರು. ಇದೆಲ್ಲಾ ಹಣ ನಿಮಗೂ ಸಿಗುತ್ತೆ. ಆದರೆ, ಹಣ ಸಿಗಬೇಕಾದ್ರೆ ಇಂತಿಷ್ಟು ಖರ್ಚಾಗುತ್ತೆ. ಅದಕ್ಕಾಗಿ ಒಂದು ಕೋಟಿ ಬೇಕೆಂದು ಹೇಳಿ ಉದ್ಯಮಿಯಿಂದಲೇ ಹಣವನ್ನು ಪಡೆದಿದ್ದರು. ಆದರೆ ನೂರು ಕೋಟಿಗಾಗಿ ಒಂದು ಕೋಟಿ ಹೋದರೆ ಹೋಗಲಿ ಎಂದು ಹಣ ಕೊಟ್ಟಿದ್ದ ಉದ್ಯಮಿ ತನಗೆ ಹಣ ಬರದಿದ್ದಾಗ ಮೋಸ ಆಗಿರುವ ಬಗ್ಗೆ ತಿಳಿದು ಪೊಲೀಸರತ್ತ ಬಂದಿದ್ದರು. ಸದ್ಯ ಐವರನ್ನ ಬಂಧಿಸಿ 87 ಲಕ್ಷ 73 ಸಾವಿರ ಹಣವನ್ನು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.
The Electronics City police on Monday arrested a five-member gang allegedly for cheating several businessmen in the city offering huge amounts of loan and escaping with the 1% commission. This amount sums up to at least ₹1 crore. Based on a complaint filed by Vincent, a garment businessman, a team of police tracked down the gang and arrested them from Mumbai and Madhya Pradesh.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm