ಬ್ರೇಕಿಂಗ್ ನ್ಯೂಸ್
15-02-22 10:11 pm HK Desk news ಕ್ರೈಂ
ವಿಜಯಪುರ, ಫೆ.15 : ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿ ಮದ್ವೆಯಾಗಿದ್ದ ಮಾಜಿ ಕಾರ್ಪೋರೇಟರ್ ಒಬ್ಬರ ಮಗಳು ಮತ್ತು ಪಿಎಸ್ಐ ಪುತ್ರನ ಲವ್ ಸ್ಟೋರಿ ದುರಂತ ಅಂತ್ಯ ಕಂಡಿದೆ. ವಿಜಯಪುರ ನಗರದಲ್ಲಿ ಹಾಡಹಗಲೇ ಅಳಿಯನನ್ನೇ ಮಾವನ ಕಡೆಯವರು ಹತ್ಯೆ ಮಾಡಿದ್ದು, ಐದು ತಿಂಗಳ ಗರ್ಭಿಣಿ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.
ಮುಸ್ತಾಕಿನ್ ಕೂಡಗಿ(28) ಮೃತ ದುರ್ದೈವಿ. ಇವರ ತಂದೆ ಗಾಂಧಿಚೌಕ್ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್ಐ ರಿಯಾಜ್ ಅಹಮದ್. ಇವರ ಸಂಬಂಧಿಯೂ ಆಗಿರುವ ವಿಜಯಪುರ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರೌಫ್ ಶೇಖ್ ಎಂಬವರ ಮಗಳು ಅತೀಕಾಳನ್ನು ಮುಸ್ತಕಿನ್ ಕೂಡಗಿ ಪ್ರೀತಿಸುತ್ತಿದ್ದ. ಇಬ್ಬರೂ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು ಯುವತಿಯ ತಂದೆ ಒಪ್ಪಿರಲಿಲ್ಲ. ವಿರೋಧದ ನಡುವೆಯೂ ಪ್ರೇಮಿಗಳಿಬ್ಬರೂ 6 ತಿಂಗಳ ಹಿಂದೆ ಮದ್ವೆಯಾಗಿದ್ದು ಮಹಾರಾಷ್ಟ್ರ ತೆರಳಿ ನೆಲೆಸಿದ್ದರು. ಬಳಿಕ ಗರ್ಭಿಣಿಯಾದ ಪತ್ನಿಯ ಜೊತೆ ಮುಸ್ತಕಿನ್, ಇತ್ತೀಚೆಗೆ ಊರಿಗೆ ಬಂದಿದ್ದು ತನ್ನ ಮನೆಯಲ್ಲೇ ವಾಸವಿದ್ದ.
ಆದರೆ ಮುಸ್ತಕಿನ್ ಊರಿಗೆ ಬಂದಿದ್ದನ್ನು ತಿಳಿದ ರೌಫ್ ಶೇಖ್ ಕಡೆಯವರು ಕೊಲೆಗೆ ಪ್ಲಾನ್ ಹಾಕಿದ್ದರು. ಮಂಗಳವಾರ ಮಧ್ಯಾಹ್ನ ವಿಜಯಪುರ ಹೊರವಲಯದ ರೇಡಿಯೋ ಕೇಂದ್ರದ ಬಳಿ ಸಾಗುತ್ತಿದ್ದ ಮುಸ್ತಕಿನ್ ಕೂಡಗಿ ಅವರನ್ನ ದುಷ್ಕರ್ಮಿಗಳು ಕೊಂದು ಮುಗಿಸಿದ್ದಾರೆ. ತನ್ನ ವಿರೋಧ ಮಧ್ಯೆಯೂ ಮಗಳನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡಿದ್ದ ಮಾವನೇ ಅಳಿಯನನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ನಿರ್ಮಾಣ ಹಂತದ ಮನೆ ಬಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ಮುಸ್ತಕಿನ್ ಮೇಲೆ ಬೊಲೆರೋ ವಾಹನ ಡಿಕ್ಕಿಯಾಗಿಸಿದ್ದು ಬಳಿಕ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಮುಸ್ತಕಿನ್ ಕೊಲೆಗೆ ಈ ಹಿಂದೆಯೂ ಹಲವು ಬಾರಿ ಯತ್ನ ನಡೆದಿತ್ತು ಎನ್ನಲಾಗಿದೆ. ಮದ್ವೆಯಾದ ಹೊಸತರಲ್ಲಿ ವಿಡಿಯೋ ಮಾಡಿದ್ದ ಅತೀಕಾ, ನನ್ನ ತಂದೆ ಹಾಗೂ ಸಹೋದರರಿಂದ ನನ್ನ ಪ್ರಿಯಕರ ಮುಸ್ತಕಿನ್ ಮತ್ತು ಅವರ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ನನಗೂ, ಮುಸ್ತಕಿನ್ ಮತ್ತು ನನ್ನ ಮಾವನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಅಳಲು ತೋಡಿಕೊಂಡಿದ್ದರು. ದಯವಿಟ್ಟು ನಮ್ಮನ್ನು ಬದುಕಲು ಬಿಡಿ ಎಂದು ಅಪ್ಪನನ್ನ ಮಗಳು ಅತೀಕಾ ಬೇಡಿಕೊಂಡಿದ್ದಳು. ಆದರೆ ಪ್ರೀತಿಸಿ ಮದುವೆ ಆಗಿದ್ದನ್ನು ಸಹಿಸದ ತಂದೆಯೇ ಮಗಳ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಗಾಂಧಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಇದೊಂದು ಅಪಘಾತ ಎಂದೇ ತಿಳಿಯಲಾಗಿತ್ತು. ಆದರೆ, ಕೂಲಂಕಷವಾಗಿ ತನಿಖೆ ನಡೆಸಲಾಗಿ ಇದೊಂದು ಪೂರ್ವಯೋಜಿತ ಕೃತ್ಯ ಎಂಬುದು ಕಂಡುಬಂದಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದೆ.
Vijayapura Angry Father-in -law kills Son-in-law for marrying his daughter.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm