ಬ್ರೇಕಿಂಗ್ ನ್ಯೂಸ್
            
                        18-09-20 04:37 pm Headline Karnataka News Network ಕ್ರೈಂ
            ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm