ಬ್ರೇಕಿಂಗ್ ನ್ಯೂಸ್
18-09-20 04:37 pm Headline Karnataka News Network ಕ್ರೈಂ
ನೈಜೀರಿಯಾ, ಸೆಪ್ಟಂಬರ್ 18: ಅತ್ಯಾಚಾರ ಪ್ರಕರಣ ಕೇಳಿಬಂದಾಗೆಲ್ಲ ಕೆಲವರು ಗೊಣಗುವುದು ಕೇಳಿರಬಹುದು. ಆತನ ‘ಅದನ್ನೇ’ ಕತ್ತರಿಸಬೇಕು ಎಂದು. ಆದರೆ, ಅಂಥ ಕಾನೂನು ಮಾತ್ರ ಎಲ್ಲಿಯೂ ಜಾರಿಯಾಗಿರಲಿಲ್ಲ. ಈಗ ನೈಜೀರಿಯಾ ಅಂಥದ್ದೊಂದು ಕಠಿಣ ಕಾನೂನು ಜಾರಿಗೆ ಮುಂದಾಗಿದೆ.
ಅತ್ಯಾಚಾರ ಪ್ರಕರಣಗಳಲ್ಲಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷೆಗಳೂ ಥರಾವರಿ ಇವೆ. ಕೆಲವೊಂದು ದೇಶಗಳಲ್ಲಿ ಗಲ್ಲು ಶಿಕ್ಷೆ, ಜೀವಾವಧಿ, 20 ವರ್ಷ ಜೈಲು ಹೀಗೆ ಶಿಕ್ಷೆಯ ಪ್ರಕಾರ ಇವೆ. ಇಂಥ ಕಠಿಣ ಶಿಕ್ಷೆಗಳಿದ್ದರೂ, ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಈಗ ನೈಜೀರಿಯಾ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಪುರುಷನ ಲೈಂಗಿಕ ಶಕ್ತಿಯನ್ನೇ ನಿಶ್ಶಕ್ತಿಗೊಳಿಸುವ ಶಿಕ್ಷೆ ಜಾರಿಗೆ ಮುಂದಾಗಿದೆ.

ನೈಜೀರಿಯಾದಲ್ಲಿ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಿದ್ದರಿಂದ ಹೊಸ ಕಾನೂನು ತರಲಾಗಿದೆ. ನೈಜೀರಿಯಾದ ಕಾಡುನ ಎನ್ನುವ ರಾಜ್ಯದ ಗವರ್ನರ್ ನಾಸಿರ್ ಅಹ್ಮದ್ ಎಲ್ ರಫಾಯಿ, ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತಂದಿದ್ದು, ಹೊಸ ಕಾಯ್ದೆ ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಪುರುಷನ ವೃಷಣಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಆತನ ಲೈಂಗಿಕ ಶಕ್ತಿಯನ್ನು ತೆಗೆದು ಹಾಕುತ್ತಾರೆ. ಆತನಿಗೆ ಮುಂದೆಂದೂ ಲೈಂಗಿಕ ಆಸಕ್ತಿಯೇ ಬರದಂತೆ ಮಾಡಲಾಗುತ್ತದೆ. ಹಾಗೆಯೇ ಮಹಿಳೆಯರು ಕೂಡ ಇಂಥ ಕೃತ್ಯ ಎಸಗಿದಲ್ಲಿ ಅವರಿಗೂ ಇದೇ ರೀತಿಯ ಶಿಕ್ಷೆ ವಿಧಿಸಲಾಗುವುದು. ಇನ್ನು 14 ವರ್ಷದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೊಳಿಸಲಾಗಿದೆ.
ಈ ಹಿಂದೆ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ನೈಜೀರಿಯಾದಲ್ಲಿ ಜೀವಾವಧಿ ಶಿಕ್ಷೆ ಮತ್ತು ಇತರೇ ಪ್ರಕರಣಗಳಿಗೆ 21 ವರ್ಷದ ಶಿಕ್ಷೆ ಜಾರಿಯಲ್ಲಿತ್ತು.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am