ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm