ಬ್ರೇಕಿಂಗ್ ನ್ಯೂಸ್
20-02-22 01:11 pm Bengaluru Correspondent ಕ್ರೈಂ
ಬೆಂಗಳೂರು, ಫೆ.20 : ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಸದಾಶಿವ ನಗರ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮೋಯಿನ್ @ ಕಾಜಾ ಮೋಯಿನ್, ತೋಹಿದ್, ಜಬೀ ಅಲಿಯಾಸ್ ಕಾಲಾ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳ ಸಾಲು ಸಾಲು ಸುಲಿಗೆ ಕಹಾನಿಯೂ ಬಯಲಿಗೆ ಬಂದಿದೆ. ಆರೋಪಿಗಳು 180ಕ್ಕೂ ಹೆಚ್ಚು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ವ್ಯವಸ್ಥಿತವಾಗಿ ಸುಲಿಗೆ ಮಾಡುತ್ತಿದ್ದ ಆರೋಪಿಗಳು ದಿನದಲ್ಲಿ ಬೆಳಗ್ಗೆ ಮತ್ತು ಸಂಜೆ ಮಾತ್ರ ತಮ್ಮ ಕೃತ್ಯಕ್ಕೆ ಸಮಯ ಮಾಡಿಕೊಂಡಿದ್ದರು. ಬೆಳಿಗ್ಗೆ 5 ರಿಂದ 8 ಮತ್ತು ರಾತ್ರಿ 8 ರಿಂದ 10ರ ವರೆಗೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದರಲ್ಲೂ ಶನಿವಾರ- ಭಾನುವಾರವೇ ಈ ಗ್ಯಾಂಗ್ ಫುಲ್ ಆಕ್ಟಿವ್ ಆಗುತ್ತಿತ್ತು. ಬೈಕ್ ಕಳ್ಳತನ ಮಾಡಿ ಅದನ್ನೇ ಬಳಸಿಕೊಂಡು ತಮ್ಮ ಕೃತ್ಯ ನಡೆಸುತ್ತಿದ್ದರು.

ಇದೇ ತಂಡ ರಾಜ್ಯದ ಹಲವೆಡೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದು ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ, ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ವಾಂಟೆಡ್ ಲಿಸ್ಟ್ ನಲ್ಲಿದ್ದಾರೆ. ಹಲವು ಠಾಣೆಗಳಲ್ಲಿ ಇವರ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಎಚ್.ಎಸ್ ಆರ್ ಲೇಔಟ್ ನಲ್ಲಿ ಹಣ ಕೊಡದ ಕಾರಣಕ್ಕೆ ಕ್ಯಾಬ್ ಚಾಲಕನಿಗೆ ಚಾಕು ಇರಿದಿದ್ದರು ಅನ್ನುವ ಮಾಹಿತಿಯೂ ಲಭಿಸಿದೆ. ಸದ್ಯ ಸದಾಶಿವನಗರ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಇತ್ತೀಚೆಗೆ ಶ್ರುತಿ ಖರ್ಗೆ ಮೊಬೈಲ್ ದೋಚಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Four accused have been arrested in connection with the mobile extortion case of Shruti Kharge(Shruthi Kharge), wife of MLA Priyank Kharge (Priyank Kharge). Sadashivanagar police, who managed to nab Khatarnak Khadimar, exposed a line of extortion and extortion of the accused during interrogation
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm