ಬ್ರೇಕಿಂಗ್ ನ್ಯೂಸ್
21-02-22 09:49 am Shivamogga Reporter ಕ್ರೈಂ
ಶಿವಮೊಗ್ಗ, ಫೆ.21: ಹಿಜಾಬ್ ಬೆಂಕಿಯಿಂದ ಉರಿಯುತ್ತಿದ್ದ ಶಿವಮೊಗ್ಗ ನಗರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತನ ಕೊಲೆಯಾಗಿದ್ದು ಮತ್ತೆ ಉದ್ವಿಗ್ನ ಸ್ಥಿತಿಗೆ ತಲುಪಿದೆ. ಭಾನುವಾರ ರಾತ್ರಿ ಏಕಾಏಕಿ ಕಾರಿನಲ್ಲಿ ಬಂದಿದ್ದ ತಂಡ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದೆ.
ಹಿಂದು ಸಂಘಟನೆ ಕಾರ್ಯಕರ್ತ ಹರ್ಷ (28) ಕೊಲೆಯಾದವರು. ಹತ್ಯೆಯಾದ ಬೆನ್ನಲ್ಲೇ ಶಿವಮೊಗ್ಗ ನಗರ ಉದ್ವಿಗ್ನ ಆಗಿದ್ದು ಕ್ಲರ್ಕ್ ಪೇಟೆ, ಎಂಕೆಕೆ ರಸ್ತೆ , ಸೀಗೆಹಟ್ಟಿ , ಇಮಾಮ್ ಬಡಾವಣೆಗಳಲ್ಲಿ ರಾತ್ರಿ ಕಲ್ಲು ತೂರಾಟ ಆಗಿದೆ. ಆಕ್ರೋಶಿತ ಪುಂಡರು ಪ್ರತಿಭಟನೆ ನೆಪದಲ್ಲಿ ಬೈಕ್ ಇನ್ನಿತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.



ಕೂಡಲೇ ಪೊಲೀಸರು ಲಾಠಿ ಬೀಸಿದ್ದು , ಜನರನ್ನು ಚದುರಿಸಲು ಯತ್ನಿಸಿದ್ದಾರೆ. ಕಲ್ಲು ತೂರಾಟ ಆಗುತ್ತಲೇ ಜನರು ಮನೆಯಿಂದ ಹೊರಬಂದು ಉದ್ವಿಗ್ನ ಸ್ಥಿತಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ಪೊಲೀಸರು ಬಳಿಕ ಅವರನ್ನು ಮನೆಯ ಒಳಗೆ ಕಳಿಸಲು ಹರಸಾಹಸ ಪಟ್ಟಿದ್ದಾರೆ. ಮಕ್ಕಳು, ಮಹಿಳೆಯರು ಹೊರಬಂದು ಪೊಲೀಸರ ರಕ್ಷಣೆ ಕೋರಿದ್ದಾರೆ. ಪೊಲೀಸರು ಆಕ್ರೋಶಿತರನ್ನು ವಶಕ್ಕೆ ಪಡೆದು ಪರಿಸ್ಥಿತಿ ಸಹಜ ಸ್ಥಿತಿಗೆ ತಂದಿದ್ದಾರೆ. ಹಿಂದು ಸಂಘಟನೆ ಮುಖಂಡರು ಪೊಲೀಸರ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ.
ಈ ಬಗ್ಗೆ ಗೃಹ ಸಚಿವ ಆರಗ ಜ್ನಾನೇಂದ್ರ ಪ್ರತಿಕ್ರಿಯೆ ನೀಡಿದ್ದು ಮೃತನ ಮನೆಯವರಿಗೆ ಸಾಂತ್ವನ ನೀಡಲಾಗಿದೆ. ಆರೋಪಿಗಳ ಸುಳಿವು ಪತ್ತೆಯಾಗಿದೆ. ತನಿಖೆ ಹಂತದಲ್ಲಿರುವಾಗ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟುತ್ತೇವೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ. ನಗರ ಭಾಗದಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಿಳಿಸಿದ್ದಾರೆ.
Section 144 was imposed in the Shivamogga district of Karnataka after a 23-year-old Bajrang Dal activist was murdered on Sunday night. He was taken to the Mc Gann district hospital where he passed away. Karnataka Home Minister Araga Jnanendra said that the matter was not related to the ongoing hijab row in the state. “But we need to wait for further investigations before arriving at a conclusion,” he said. Araga Jnanendra spoke to the family of the deceased, who was a tailor, in Shivamogga.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm