ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm