ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm