ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm