ಬ್ರೇಕಿಂಗ್ ನ್ಯೂಸ್
25-02-22 07:39 pm HK Desk news ಕ್ರೈಂ
ಶಿವಮೊಗ್ಗ, ಫೆ.25 : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಿದ್ದೇವೆ. ವಶಕ್ಕೆ ಪಡೆದವರ ವಿಚಾರಣೆ ಆರಂಭಿಸುತ್ತೇವೆ. ವಿಚಾರಣೆ ಬಳಿಕ ಬೇರೆ ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ತಿಳಿಯಲಿದೆ. 14 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆಗೆ ಬಳಸಿದ್ದ ಕಾರನ್ನು ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರು ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದೇವೆ. ಕೊಲೆ ಮಾಡಲು ಬೇರೆ ರಾಜ್ಯದ ಕಾರನ್ನು ಬಳಸಿಕೊಂಡಿದ್ದಾರೆ. ಆ ಕಾರು ಯಾರದ್ದು, ಶಿವಮೊಗ್ಗಕ್ಕೆ ಯಾಕೆ ಬಂತು, ಕಾರಿನ ಮಾಲಕರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಡಿಯೋ ಕಾಲ್ ಮಾಡಿದವರ ಪತ್ತೆ
ಕೊಲೆಯಾದ ಹರ್ಷನ ಮೊಬೈಲ್ ಫೋನ್ ಇದುವರೆಗೂ ಪತ್ತೆಯಾಗಿಲ್ಲ. ಆದರೆ ಆತನಿಗೆ ಕೊಲೆಯಾಗೋದಕ್ಕೂ ಮುನ್ನ ವೀಡಿಯೋ ಕರೆ ಮಾಡಿದವರನ್ನು ಪತ್ತೆ ಮಾಡಿದ್ದೇವೆ. ವಿಡಿಯೋ ಕರೆ ಮಾಡಿದವರಿಗೂ ಹಂತಕರಿಗೂ ಯಾವುದೇ ಸಂಬಂಧ ಇಲ್ಲ. ಅದರ ಬಗ್ಗೆ ವಿಚಾರಣೆ ಮಾಡಿದ್ದೇವೆ. ಮೆರವಣಿಗೆ ವೇಳೆ ಪೊಲೀಸರಿಗೆ ಲಾಂಗ್- ಮಚ್ಚು ತೋರಿಸಿ ಬೆದರಿಕೆ ಹಾಕಿದವರು ಯಾರು ಎಂಬುದು ಗೊತ್ತಾಗಿದೆ. ಸಿಸಿಟಿವಿ ಆಧರಿಸಿ ಅವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹರ್ಷ ಕೊಲೆ ಪ್ರಕರಣದಲ್ಲಿ ಸಾತು ಆ್ಯಂಡ್ ಗ್ಯಾಂಗ್ ಭಾಗಿಯಾಗಿತ್ತೇ ಎಂಬ ಪ್ರಶ್ನೆಗೆ, ಆ ಬಗ್ಗೆ ತನಿಖೆ ನಡೆಸುತಿದ್ದೇವೆ. ಕೊಲೆ ಹಿಂದೆ ಯಾವುದಾದರೂ ಸಂಘಟನೆಗಳಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಖಾಸಿಫ್, ಆಸಿಫ್ ಮೇಲೆ ಐದು, ರಿಹಾನ್ ಮೇಲೆ ಮೂರು ಹಾಗೂ ಅಫ್ನಾನ್ ಮೇಲೆ ಎರಡು ಕಾನೂನು ಸುವ್ಯವಸ್ಥೆಗೆ ಧಕ್ಕೆ ಎಸಗಿದ ಕೋಮು ವೈಷಮ್ಯದ ಪ್ರಕರಣಗಳಿವೆ. ಉಳಿದಂತೆ ಡಕಾಯಿತಿ, ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕೊಲೆಯಾದ ಹರ್ಷನ ಮೇಲೆ ಧರ್ಮ ದ್ವೇಷ ಸಂಬಂಧಿಸಿದ ಎರಡು ಪ್ರಕರಣ ದಾಖಲಾಗಿತ್ತು ಎಂದು ಎಸ್ಪಿ ಹೇಳಿದರು.
Harsha Murder case 10 arrested so far, investigating organisation support angle says SP Lakshmi Prasad.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm