ಬ್ರೇಕಿಂಗ್ ನ್ಯೂಸ್
25-02-22 11:00 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.25 : ಧರ್ಮಸ್ಥಳ ಭಾಗದಲ್ಲಿ ಬಜರಂಗದಳ ಮತ್ತು ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಗೆ ಕ್ಷುಲ್ಲಕ ಕಾರಣಕ್ಕೆ ತುಳಿದು ಹಲ್ಲೆಗೊಳಿಸಿದ ಘಟನೆ ನಡೆದಿದ್ದು, ತರುವಾಯ ಎರಡು ದಿನಗಳ ಬಳಿಕ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಕೊಲೆಯಾದ ವ್ಯಕ್ತಿ ದಿನೇಶ್ ನಾಯ್ಕ (41) ಎಂಬವನಾಗಿದ್ದು, ಆರೋಪಿಯನ್ನು ಕಿಟ್ಟ ಅಲಿಯಾಸ್ ಕೃಷ್ಣ ಡಿ. ಎಂದು ಗುರುತಿಸಲಾಗಿದೆ. ಫೆ.23ರಂದು ದಿನೇಶ್ ನಾಯ್ಕ, ಕೃಷ್ಣನಿಗೆ ಸೇರಿದ ಅಂಗಡಿಯ ಮುಂದೆ ಬಂದು ಜಾಗದ ದಾಖಲೆಗಳನ್ನು ಮಾಡಿಕೊಟ್ಟಿರುವ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿಗೆ ಮಾತು ಬೆಳೆದು ಕೃಷ್ಣ, ದಿನೇಶ ನಾಯ್ಕನ ಮೇಲೆ ಹಲ್ಲೆಗೈದು ಹೊಟ್ಟೆಗೆ ತುಳಿದಿದ್ದ. ಇದರಿಂದ ತೀವ್ರ ನೋವಿಗೆ ಒಳಗಾಗಿದ್ದ ದಿನೇಶ ನಾಯ್ಕ ಮನೆಗೆ ತೆರಳಿ, ಆಗಿರುವ ವಿಚಾರವನ್ನು ಮನೆಯವರಲ್ಲಿ ಹೇಳಿ ನೋವಿನಲ್ಲಿ ಮಲಗಿದ್ದ.
ಆನಂತರ, ಹೊಟ್ಟೆಯ ಭಾಗಕ್ಕೆ ಹಲ್ಲೆಯಾಗಿದ್ದರಿಂದ ನೋವಿನಿಂದ ಬಳಲುತ್ತಿದ್ದ ಮಗನ ಬಗ್ಗೆ, ದಿನೇಶ್ ನಾಯ್ಕನ ತಾಯಿ ಆರೋಪಿ ಕೃಷ್ಣನ ಬಳಿಗೆ ಬಂದು, ನೀನು ಹಲ್ಲೆ ನಡೆಸಿದ್ದರಿಂದ ಗಾಯಗೊಂಡಿದ್ದಾನೆ. ನನಗೆ ಆತನನ್ನು ಆಸ್ಪತ್ರೆಗೆ ಒಯ್ಯಲು ಹಣ ಇಲ್ಲ. ನೀನೇ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿದ್ದರು. ಅದರಂತೆ, ಆರೋಪಿ ಕೃಷ್ಣ, ದಿನೇಶ್ ನಾಯ್ಕನನ್ನು ಆತನ ಪತ್ನಿಯ ಜೊತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲು ಮಾಡಿದ್ದ. ಅಲ್ಲದೆ, ವೈದ್ಯರಲ್ಲಿ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಿದ್ದ. ಆದರೆ ದಿನೇಶ್ ಫೆ.25ರಂದು ನಸುಕಿನಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಇದರ ಬಗ್ಗೆ ದಿನೇಶ್ ನಾಯ್ಕನ ತಾಯಿ ಪದ್ಮಾವತಿ, ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಕೃಷ್ಣನ ಹಲ್ಲೆಯಿಂದಲೇ ಮೃತಪಟ್ಟಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
Dharmasthala BJP member alleged of assault and Murder, case filed. The deceased has been identified as Dinesh Nayak.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm