ಬ್ರೇಕಿಂಗ್ ನ್ಯೂಸ್
04-03-22 03:21 pm HK Desk news ಕ್ರೈಂ
ತುಮಕೂರು, ಮಾ.4: ಮಕ್ಕಳಿಲ್ಲದ ದಂಪತಿಯನ್ನೇ ಟಾರ್ಗೆಟ್ ಮಾಡಿಕೊಂಡು ಮಕ್ಕಳಾಗಲು ಔಷಧಿ ಕೊಡುತ್ತೇವೆಂದು ಹೇಳಿ ತಮ್ಮನ್ನು ಡಾಕ್ಟರ್ ದಂಪತಿಯೆಂದು ಹೇಳಿಕೊಂಡು 70ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದ್ದು, ವಂಚಕ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಠಾಣೆಯ ಪೊಲೀಸರು ವಾಣಿ ಮತ್ತು ಮಂಜುನಾಥ್ ಎಂಬ ದಂಪತಿಯನ್ನು ಬಂಧಿಸಿದ್ದಾರೆ. ಕಾರಿನಲ್ಲಿಯೇ ಓಡಾಡುತ್ತಿದ್ದ ಇವರು, ತಮ್ಮನ್ನು ಡಾಕ್ಟರ್ ಎಂದು ಹೇಳಿಕೊಳ್ಳುತ್ತಿದ್ದರು. ವಾಣಿ ತನ್ನ ಕೊರಳಿಗೆ ಸ್ಟೆತಸ್ಕೋಪ್ ಸಿಕ್ಕಿಸಿಕೊಂಡು ಅಸಲಿ ಡಾಕ್ಟರ್ ರೀತಿಯಲ್ಲೇ ಪೋಸು ಕೊಡುತ್ತಿದ್ದಳು. ಮಕ್ಕಳಿಲ್ಲದ ದಂಪತಿಯ ಮನೆಗಳಿಗೆ ತೆರಳಿ, ನಾವು ಹೇಳಿದ ರೀತಿ ಕೇಳಿದರೆ ಮಕ್ಕಳಾಗುತ್ತದೆ. ಅದಕ್ಕಾಗಿ ನಾವು ಕೆಲವು ಔಷಧಿಗಳನ್ನು ಕೊಡುತ್ತೇವೆ, ಅದಕ್ಕೆ ಇಂತಿಷ್ಟು ಹಣ ಖರ್ಚಾಗುತ್ತದೆ ಎಂದು ಹೇಳಿ 2ರಿಂದ 5 ಲಕ್ಷ ರೂ.ಗಳ ಪ್ಯಾಕೇಜ್ ಫಿಕ್ಸ್ ಮಾಡುತ್ತಿದ್ದರು.
ಅಲ್ಲದೆ, ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು. ಸೂಕ್ತ ಆಹಾರ ಸೇವಿಸಬೇಕೆಂದು ಸಲಹೆಯನ್ನೂ ನೀಡುತ್ತಿದ್ದರು. ನಮ್ಮ ಪ್ಯಾಕೇಜ್ ನಲ್ಲಿ ಇಂಜೆಕ್ಷನ್, ಪ್ರೋಟೀನ್ ಭರಿತ ಪೌಡರ್ ಗಳು ಇರುತ್ತವೆ. ನಿಯಮಿತವಾಗಿ ಆಹಾರ ಸ್ವೀಕರಿಸಿದರೆ ಸಾಕು, ಆಗಾಗ ಯಾವುದೇ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿ ಮಕ್ಕಳಾಗದ ದಂಪತಿಯನ್ನು ನಂಬಿಸುತ್ತಿದ್ದರು. ಇದೇ ರೀತಿಯ ಮಾತುಗಳಿಗೆ ಮರುಳಾಗಿ ಹಣ ಮತ್ತು ಆರೋಗ್ಯ ಕಳಕೊಂಡ ಮಹಿಳೆಯೊಬ್ಬರು ನೊಣವಿನಕೆರೆ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ನಕಲಿ ಡಾಕ್ಟರ್ ದಂಪತಿಯನ್ನು ಬಂಧಿಸಿದ್ದಾರೆ. ವಂಚನೆಗೊಳಗಾದ ದಂಪತಿ, ಇವರಿಂದ ಕಳೆದ ಆರು ತಿಂಗಳಿಂದ ಚಿಕಿತ್ಸೆ ಪಡೆದಿದ್ದಲ್ಲದೆ, ಸಾಕಷ್ಟು ಹಣವನ್ನೂ ಕಳಕೊಂಡಿದ್ದರು. ತಿಪಟೂರು ತಾಲೂಕಿನ ಬೆಳಗರಹಳ್ಳಿ ಗ್ರಾಮದ ಐದಾರು ಮಹಿಳೆಯರು ವಂಚಕ ದಂಪತಿಯಿಂದ ಮೋಸಕ್ಕೆ ಒಳಗಾಗಿದ್ದು ತನಿಖೆಯಲ್ಲಿ ಕಂಡುಬಂದಿದೆ. ಪ್ರತೀ ಮಹಿಳೆಯಿಂದ 2.5 ಲಕ್ಷ ರೂ. ಹಣವನ್ನು ಪಡೆದು ವಂಚಿಸಿದ್ದು ತನಿಖೆಯಲ್ಲಿ ಗೊತ್ತಾಗಿದೆ.
ನಕಲಿ ಡಾಕ್ಟರ್ ದಂಪತಿ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆಯೊಬ್ಬರಿಗೆ ಆರೋಗ್ಯದಲ್ಲಿ ಅಡ್ಡ ಪರಿಣಾಮ ಉಂಟಾಗಿತ್ತು. ಆರೋಗ್ಯದಲ್ಲಿ ವೈಪರೀತ್ಯ ಎದುರಾಗಿದ್ದನ್ನು ತಿಳಿಸಿದಾಗ, ನಕಲಿ ಡಾಕ್ಟರ್ ವಾಣಿ ಅದಕ್ಕಾಗಿ ಮತ್ತಷ್ಟು ಮಾತ್ರೆ, ಔಷಧಿಗಳನ್ನು ಕೊಟ್ಟಿದ್ದಳು. ಅದನ್ನು ಸ್ವೀಕರಿಸಿದ ಬಳಿಕ ಮಹಿಳೆಗೆ ಗಂಭೀರ ಸ್ಥಿತಿ ಉಂಟಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಮೊದಲೇ ಕಿಡ್ನಿ, ಹೃದಯ ಸಂಬಂಧಿ ಕಾಯಿಲೆ ಇದ್ದುದರಿಂದ ಮಹಿಳೆಯ ಸ್ಥಿತಿ ಬಿಗಡಾಯಿಸಿತ್ತು. ಅಲ್ಲಿ ಪರೀಕ್ಷೆ ನಡೆಸಿದಾಗ, ಆರೋಪಿ ಮಹಿಳೆ ನೀಡಿದ್ದ ಇಂಜೆಕ್ಷನ್ ಬಗ್ಗೆ ವೈದ್ಯರಿಗೆ ತಿಳಿಸಿದ್ದರು. ಈ ಬಗ್ಗೆ ವಾಣಿಯನ್ನು ಮಹಿಳೆ ಸಂಪರ್ಕಿಸಿದಾಗ, ತನ್ನ ತಪ್ಪಾಗಿರುವುದಾಗಿ ಕ್ಷಮೆ ಕೇಳಿದ್ದಾರೆ. ವಂಚನೆ ಗೊತ್ತಾಗುತ್ತಲೇ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ವಂಚಕ ದಂಪತಿಯನ್ನು ಸಕಲೇಶಪುರದಲ್ಲಿ ಬಂಧಿಸಿದ್ದು, ಅವರಿಂದ ಹತ್ತು ಲಕ್ಷ ರೂ. ನಗದು ಮತ್ತು 250 ಗ್ರಾಮ್ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ದಂಪತಿ ಡಾಕ್ಟರ್ ಲೋಗೊ ಬಳಸಿ ಓಡಾಡುತ್ತಿದ್ದ ಮಹೀಂದ್ರಾ ಕಂಪನಿಯ ಕಾರನ್ನೂ ವಶಕ್ಕೆ ಪಡೆದಿದ್ದಾರೆ. ತಿಪಟೂರು ತಾಲೂಕು ಒಂದರಲ್ಲೇ 70ಕ್ಕೂ ಹೆಚ್ಚು ದಂಪತಿಗೆ ಇದೇ ರೀತಿ ಮೋಸ ಮಾಡಿ, ಹಣ ಪೀಕಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಂಚನೆಗೊಳಗಾದವರಲ್ಲಿ ಹೆಚ್ಚಿನವರು ಸಮಾಜದಲ್ಲಿ ಮರ್ಯಾದೆಗೆ ಅಂಜಿ ಪೊಲೀಸ್ ದೂರು ಕೊಡದೇ ದೂರವುಳಿದಿದ್ದರಿಂದ ದಂಪತಿಯ ವಂಚನೆ ಪುರಾಣ ಮತ್ತಷ್ಟು ಬೆಳೆದಿತ್ತು.
The police from here have arrested a couple which targetted childless couples and cheated them by promising them to have children.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm