ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm