ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm