ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm