ಬ್ರೇಕಿಂಗ್ ನ್ಯೂಸ್
08-03-22 04:15 pm HK Desk ಕ್ರೈಂ
ಶಿವಮೊಗ್ಗ, ಮಾ.8: ರಾಜ್ಯದಲ್ಲಿ ಸಂಚಲನ ಎಬ್ಬಿಸಿದ ಹಿಂದು ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಎಪಿಎ ಕಾಯ್ದೆಯಡಿ ಕೇಸು ದಾಖಲು ಮಾಡಿರುವುದರಿಂದ ಪ್ರಕರಣವನ್ನು ಸದ್ಯದಲ್ಲೇ ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಯುಎಪಿಎ ಕಾಯ್ದೆಯನ್ನು ಸಾಮಾನ್ಯವಾಗಿ ರಾಷ್ಟ್ರೀಯ ಭದ್ರತೆ ಮತ್ತು ಆಂತರಿಕ ಸಮಗ್ರತೆಗೆ ಧಕ್ಕೆಯಾದ ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಅನ್ವಯ ಮಾಡಲಾಗುತ್ತದೆ. ಆದರೆ ಇಲ್ಲಿ ಒಂದು ಕೊಲೆ ಪ್ರಕರಣಕ್ಕೂ ಆರೋಪಿಗಳನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಿದ್ದು ಆಕ್ಷೇಪಕ್ಕೂ ಕಾರಣವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೇಶದ್ರೋಹದ ಕಾಯ್ದೆ ಅಳವಡಿಸಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ.

ಯುಎಪಿಎ ಕಾಯ್ದೆ ಪ್ರಕಾರ, ಆರೋಪಿಗಳನ್ನು ಪೊಲೀಸರು 30 ದಿನಗಳ ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಿರುತ್ತದೆ. ಅಲ್ಲದೆ, ಪ್ರಕರಣದಲ್ಲಿ ತನಿಖಾಧಿಕಾರಿಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು 90 ದಿನಗಳ ಬದಲಿಗೆ 180 ದಿನಗಳ ವರೆಗೂ ಅವಕಾಶ ಇರುತ್ತದೆ. ಫೆ.20ರಂದು ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದ್ವೇಷದ ಅಹಿತಕರ ಘಟನೆ ನಡೆಯಲು ಕಾರಣವಾಗಿತ್ತು. ಇದೇ ವೇಳೆ, ಈ ಕೊಲೆಯ ಹಿಂದೆ ಪಿಎಫ್ಐ ಮತ್ತು ಎಸ್ಡಿಪಿಐ ಇದೆಯೆಂದೂ, ಅದನ್ನು ಬ್ಯಾನ್ ಮಾಡಬೇಕೆಂದು ಭಾರೀ ಆಗ್ರಹ ಕೇಳಿಬಂದಿತ್ತು.
ಈ ಮಧ್ಯೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಪಿಎಫ್ಐ ಅಥವಾ ಎಸ್ಡಿಪಿಐ ನಿಷೇಧ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಹರ್ಷನ ಮನೆಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ, ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದರು. ಕೊಲೆಯಾದ ಹರ್ಷ ಹಿಂದು ಪರ ಮತ್ತು ಹಿಜಾಬ್ ವಿರೋಧಿಸಿ ಪೋಸ್ಟ್ ಹಾಕುತ್ತಿದ್ದ. ಇದೇ ವಿಚಾರದಲ್ಲಿ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎನ್ನುವ ಮಾಹಿತಿ ಹೊರಬಂದಿತ್ತು. ಇದೀಗ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ಕಂಡುಬಂದಿದೆ.
Moreover, there are possibilities that once the local police investigation is completed, the government may turn the case over to the National Investigation Agency (NIA).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm