ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm