ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm