ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm