ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm