ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm