ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm