ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm