ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm