ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm