ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm