ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm