ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm