ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm