ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm