ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm