ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm