ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm