ಬ್ರೇಕಿಂಗ್ ನ್ಯೂಸ್
24-03-22 11:45 am Mangalore Correspondent ಕ್ರೈಂ
ಉಳ್ಳಾಲ, ಮಾ.24 : ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪಿಎಸ್ ಐ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಪಿಎಸ್ ಐ ಶರಣಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೂರಿ ಇರಿದ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನಿಗೆ ಸಹಕರಿಸಿದ ನಝೀರ್ ಎಂಬವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ ಮಹಮ್ಮದ್ ಸಾದಿಕ್ ಪಾವೂರಿನಲ್ಲಿ ತನ್ನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಬೆಲೆಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ಬಂದರು ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಕಾಸರಗೋಡು ಕಡೆಯಿಂದ ಕದ್ದು ತಂದಿದ್ದ ಬೆಲೆಬಾಳುವ ವಾಚನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ಬಂದಿದ್ದ ಬಗ್ಗೆ ಮಾಹಿತಿಯನ್ನು ಅಂಗಡಿ ಮಾಲಿಕರೇ ಪೊಲೀಸರಿಗೆ ತಿಳಿಸಿದ್ದರು. ನಗರದ ಬಂದರು ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಪೊಲೀಸ್ ಸಿಬಂದಿ ವಿನೋದ್ ಮತ್ತು ಪ್ರವೀಣ್ ಎಂಬವರಿಗೆ ಚೂರಿಯಿಂದ ಹಲ್ಲೆಗೈದು ಪರಾರಿಯಾಗಿದ್ದ. ಸಿಬಂದಿ ವಿನೋದ್ ಅವರಿಗೆ ಚೂರಿಯಿಂದ ಇರಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ.
ಇದೀಗ ಆರೋಪಿ ಹರೇಕಳದ ಪಾವೂರಿನ ಮನೆಯೊಂದರಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿ ಬುಧವಾರ ರಾತ್ರಿ ದಾಳಿ ಮಾಡಿದ್ದು ಆರೋಪಿ ಸಾದಿಕ್ ಪಿಎಸ್ ಐ ಶರಣಪ್ಪ ಅವರ ತೋಳಿಗೆ ಚೂರಿಯಿಂದ ಗಾಯಗೊಳಿಸಿ ಪರಾರಿಯಾಗಿದ್ದಾನೆ.
ಚೂರಿ ಇರಿದ ಆರೋಪಿ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನ ಜೊತೆಗಿದ್ದ ನಝೀರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಯಿಂದ ಗಾಯಗೊಂಡಿರುವ ಶರಣಪ್ಪ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In an incident which happened during the late night hours of Wednesday March 23 within the limits of Konaje police station, a theft-accused stabbed and injured a policeman. The incident happened when a police team went to take the accused into custody for questioning. In this attack, Konaje police sub-inspector (PSI) Sharanappa, was injured. He has been admitted into a hospital.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm