ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm